ಆಲೂಗಡ್ಡೆ

ಆಲೂಗಡ್ಡೆ
ಆಲೂಗಡ್ಡೆ
Scientific classification
ಸಾಮ್ರಾಜ್ಯ:
plantae
(ಶ್ರೇಣಿಯಿಲ್ಲದ್ದು):
Asterids
ಗಣ:
ಸೋಲನೇಲ್ಸ್
ಕುಟುಂಬ:
ಸೊಲನೆಸಿಯೆ
ಕುಲ:
ಸೋಲನಮ್
ಪ್ರಜಾತಿ:
S. tuberosum
Binomial name
ಸೊಲನಮ್ ಟುಬೆರೋಸಮ್
L.

ಆಲೂಗಡ್ಡೆಯು ಸೊಲ್ಯಾನೇಸೀ ಕುಟುಂಬದ ಬಹುವಾರ್ಷಿಕ ಸಲೇನಮ್ ಟ್ಯೂಬರೋಸಮ್‌ನ ಒಂದು ಪಿಷ್ಟವುಳ್ಳ, ಗೆಡ್ಡೆ ಬೆಳೆ. ಆಲೂಗಡ್ಡೆ ಶಬ್ದ ಆ ಸಸ್ಯವನ್ನೂ ನಿರ್ದೇಶಿಸಬಹುದು. ಆಂಡೀಸ್‌ನ ಪ್ರದೇಶದಲ್ಲಿ, ಕೆಲವು ಇತರ ನಿಕಟವಾಗಿ ಸಂಬಂಧಿತ ಸಾಗುವಳಿ ಮಾಡಲಾದ ಆಲೂಗಡ್ಡೆ ಜಾತಿಗಳಿವೆ. ಆಲೂಗಡ್ಡೆಗಳು, ಅಕ್ಕಿ, ಗೋಧಿ, ಮತ್ತು ಮೆಕ್ಕೆ ಜೋಳದ ನಂತರ, ವಿಶ್ವದ ನಾಲ್ಕನೇ ಅತಿ ದೊಡ್ಡ ಆಹಾರ ಬೆಳೆಯಾಗಿವೆ.

ಸಸ್ಯಮೂಲ-ಪರಿಚಯ

ಬಡವರಿಗೂ, ಬಳಲ್ಲಿದರಿಗೂ ಆಲೂಗಡ್ಡೆ ರುಚಿ ಅಂಟಿಕೊಂಡಿದೆ.ಆದ್ದರಿಂದ ಬಿ.ಜಿ.ಎಲ್.ಸ್ವಾಮಿಯವರು ಇದಕ್ಕೆ 'ಕಲ್ಪಕಂದ' ಎಂದು ಹೆಸರಿಸಿದ್ದಾರೆ. ಈ ಕಲ್ಪಕಂದವು ವಿದೇಶೀಯರ ದೈನಂದಿನ ಆಹಾರಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಕರ್ನಾಟಕದ ಹಲವು ಪ್ರದೇಶಗಲ್ಲಿ ಬಟಾಟೆ ಎಂದು ಕರೆಯಲ್ಪಡುವ ಈ ಹೆಸರು ಮೂಲದ ಪೊಟಾಟೋದಿಂದಲೇ ಬಂದದ್ದು. ನಾವು ಅಕ್ಕಿಯನ್ನೂ, ಉತ್ತರ ಭಾರತೀಯರು ಗೋಧಿಯನ್ನು ಬಳಸುವಂತೆ, ಬೇಯಿಸಿದ, ಬಾಡಿಸಿದ, ಹುರಿದ ಆಲೂ ಪಾಶ್ಚಾತ್ಯರಿಗೆ ಅನ್ನದಂತೆ.

ಔಷಧೀಯ ಗುಣಗಳು

ನಾವು ಸಾಮಾನ್ಯವಾಗಿ ಆಲೂಗಡ್ಡೆಯನ್ನು ಆರೋಗ್ಯಕರ ಆಹಾರವೆಂದು ಪರಿಗಣಿಸುವುದಿಲ್ಲ, ಆದರೆ ಫೈಬರ್, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಸೇರಿದಂತೆ ಹಣ್ಣುಗಳು ಮತ್ತು ತರಕಾರಿಗಳಿಂದ ನೀವು ಪಡೆಯುವ ಅದೇ ಪೋಷಕಾಂಶಗಳಲ್ಲಿ ಆಲೂಗಡ್ಡೆ ನಿಜವಾಗಿಯೂ ಸಮೃದ್ಧವಾಗಿವೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸಲು ಮತ್ತು ಕ್ಯಾನ್ಸರ್-ಉಂಟುಮಾಡುವ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.[೧]

  • ಈ ಪೋಷಕಾಂಶಗಳಲ್ಲದೆ ಅವಶ್ಯಕ ಅಮೈನೋ ಆಮ್ಲಗಳು ಕೂಡ ಇರುವುದರಿಂದ ರುಚಿ ಹಿತರಕವಾಗಿದ್ದು ಎಲ್ಲಾ ತಿಂಡಿತಿನಿಸುಗಳಲ್ಲಿ ಬಳಸಬಹುದಾದ, ಸುಲಭವಾಗಿ ದೊರೆಯುವ, ಪ್ರಪಂಚದಾದ್ಯಂತ ಬಳಕೆಯಲ್ಲಿರುವ ಗೆಡ್ಡೆ ತರಕಾರಿ.
  • ಆಲೂಗಡ್ಡೆಯನ್ನು ೩ ಭಾಗಗಳಾಗಿ ವಿಂಗಡಿಸಬಹುದು.
  • ಮೊದಲನೆಯದು,ಮೇಲ್ಭಾಗದ ಸಿಪ್ಪೆ,ಎರಡನೆಯದು,ಸಿಪ್ಪೆಯ ಮೇಲ್ಬಾಗದಲ್ಲಿರುವ ತೆಳುವಾದ ಪೊರೆ,ಮೂರನೆಯದು, ಒಳ ಪಿಷ್ಟ ಭಾಗ.
  • ಮೊದಲನೆಯ ಭಾಗದಲ್ಲಿ ಖನಿಜಾಂಶಾ ಮತ್ತು ಜೀವಸತ್ವಗಳಿರುತ್ತವೆ.
  • ಎರಡನೆಯ ಪದರದಲ್ಲಿ ಸಸಾರಜನಕ ಮತ್ತು ವರ್ಣದ್ರವ್ಯ ಇರುತ್ತವೆ.
  • ಈ ವರ್ಣದ್ರವ್ಯ ನಾವು ಆಲೂಗಡ್ಡೆಯನ್ನು ಕತ್ತರಿಸಿದಾಗ ಗಾಳಿಯ ಸಂಪರ್ಕಕ್ಕೆ ಬಂದು ಆಲೂಗಡ್ಡೆಯ ಬಣ್ಣವನ್ನು ಬದಲಾಯಿಸುತ್ತದೆ.
  • ಮೂರನೇಯ ಭಾಗವು ಪಿಷ್ಟ ಮತ್ತು ನೀರಿನಿಂದ ಕೂಡಿರುತ್ತದೆ.
  • ಆದುದರಿಂದಲೇ ಆಲೂಗಡ್ಡೆಯ ಸಿಪ್ಪೆಯನ್ನು ತೆಗೆಯುದರಿಂದ ಅಥವಾ ತೊಳೆಯುದರಿಂದ ಪೋಷಕಾಂಶಗಳು ನಷ್ಟವಾಗಿ ಕೇವಲ ಪಿಷ್ಟ ಪದಾರ್ಥ ಮಾತ್ರ ಉಳಿಯುತ್ತದೆ.

ತಿಂಡಿಗಳು

  • ಆಲೂ ಪಾಯಸ:ಬೇಯಿಸಿದ ಆಲೂಗಡ್ಡೆಯನ್ನು ರುಬ್ಬಿ ಹಾಲಿಗೆ ಸೇರಿಸಿ ಕುದಿಸಿ, ರುಚಿಗೆ ತಕ್ಕಷ್ಟು ಸಕ್ಕರೆ ಸೇರಿಸಬೇಕು.ಹುರಿದ ಗೋಡಂಬಿ ಮತ್ತು ದ್ರಾಕ್ಷಿ ಸೇರಿಸಬಹುದು. ಹೆಚ್ಚಿನ ರುಚಿ ಬೇಕಾದರೆ ಹಾಲಿನೊಂದಿಗೆಖೋವಾ ಸೇರಿಸಿದರೆ ವಿಶೇಷ ರುಚಿ ಬರುತ್ತದೆ.
  • ಆಲೂ ಹಲ್ವ:ಆಲೂಗಡ್ಡೆಯನ್ನು ಶುಚಿಮಾಡಿ ಬೇಯಿಸಿ ಚೆನ್ನಾಗಿ ಮಸೆದು ಸಕ್ಕರೆ ಬೆರೆಸಿ ಬಾಣಲೆಯಲ್ಲಿ ಹಾಕಿ ಒಲೆಯ ಮೇಲಿಟ್ಟು ಮಗಚುತ್ತಾ ತುಪ್ಪ ಸೇರಿಸಿದರೆ ಒಳ್ಳೆಯ ವಾಸನೆ ಬಂದು ಪಾತ್ರೆ ಬಿಡುವಾಗ ತುಪ್ಪ ಸವರಿದ ತಟ್ಟೆಗೆ ಹರಡಿ ಇಡಬೇಕು.ಆರಿದ ಮೇಲೆ ಬೇಕಾದ ಆಕಾರಕ್ಕೆ ಕತ್ತರಿಸಿ ಉಪಯೋಗಿಸಬವುದು.

ತಳಿಗಳು

ಆಲೂಗಡ್ಡೆ

ಇದು ಬಹುಬೇಗ ೯೦ ದಿನಗಳಲ್ಲಿ ಇಳುವರಿಗೆ ಬರುವ ಮತ್ತು ವಿವಿಧ ಹವಾಗುಣಗಳಿಗೆ ಹೊಂದಿಕೊಂಡು ಬೇಳೆಯುವ ಭಾರತದ ಉತ್ತಮ ತಳಿ.ಚಪ್ಪಟೆಯದ ಗೆಡ್ಡೆಗಳು ವಿಶಾಲವಾದ, ನಯವಾದ ಮೇಲ್ಮೈ ಹೊಂದಿರುತ್ತವೆ.

ಬೀಜ ಮತ್ತು ಬಿತ್ತನೆ

ಈ ಬೆಳೆಯನ್ನು ಗೆಡ್ಡೆಗಳ ಮುಖಾಂತರ ಸಸ್ಯಾಭಿವ್ರದ್ಧಿ ಮಾಡಲಾಗುವುದು. ಈ ಉದೇಶಕ್ಕೆ ಇಡೀ ಗೆಡ್ಡೆ ಅಥವಾ ಗೆಡ್ಡೆಯ ಚೂರುಗಳನ್ನು ಬೀಜವಾಗಿ ಬಳಸುತ್ತಾರೆ. ಆಲೂಗಡ್ಡೆಗೆ ಮಾರಕವಾದ ರೋಗಗಳು ಗೆಡ್ಡೆಗಳ ಮುಖಾಂತರ ಹರಡುವುದರಿಂದ ರೋಗರಹಿತ ಗೆಡ್ಡೆಗಳನ್ನು ಮಾತ್ರ ಬಳಸಬೇಕು.

ನೀರಾವರಿ ಮತ್ತು ಅಂತರಬೇಸಾಯ

ನಾಟಿಮಾಡಿದ ಕೂಡಲೆ ತೆಳು ನೀರಾವರಿ ಒದಗಿಸಬೇಕು.ನಂತರದ ನೀರಾವರಿಗಳನ್ನು ಮಣ್ಣು ಮತ್ತು ಹವಾಗುಣಗಳಿಗನುಗುಣವಾಗಿ ೫-೭ ದಿನಗಳ ಅಂತರದಲ್ಲಿ ಕೊಡಬೇಕು ಮತ್ತು ಕಳೆ ಬರದಂತೆ ಎಚ್ಚರ ವಹಿಸಬೇಕು.[೨]

ಉಲ್ಲೇಖ

🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ