ಎಚ್. ಜಿ ಗೋವಿಂದೇಗೌಡರು

'ಮಲೆನಾಡ ಗಾಂಧಿ' ಎಂದೇ ಪ್ರಸಿದ್ಧರಾಗಿದ್ದ ಎಚ್ ಜಿ ಗೋವಿಂದೇಗೌಡರು ಕರ್ನಾಟಕ ಸರ್ಕಾರದ ಶಿಕ್ಷಣ ಮಂತ್ರಿಗಳಾಗಿ ಹೆಸರು ಮಾಡಿದವರು. ಅವರ ಅಧಿಕಾರಾವಧಿಯಲ್ಲಿ ಒಂದು ಲಕ್ಷದ ಐದು ಸಾವಿರ ಶಿಕ್ಷಕರನ್ನು ನೇಮಿಸಿದರು. 1999ರಲ್ಲಿ ರಾಜಕೀಯ ನಿವೃತ್ತಿ ಹೊಂದಿದರು.

ಎಚ್. ಜಿ ಗೋವಿಂದೇಗೌಡರು
ಜನನಮೇ 25, 1926
ಕಾನೂರು ಗ್ರಾಮದ ಹಿಣಚಿ, ಎನ್.ಆರ್.ಪುರ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ, ಕರ್ನಾಟಕ, ಭಾರತ
ಮರಣಜನವರಿ 6, 2016
ಕೊಪ್ಪ ಪಟ್ಟಣ, ಎನ್.ಆರ್.ಪುರ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ, ಕರ್ನಾಟಕ, ಭಾರತ
ವೃತ್ತಿರಾಜಕಾರಣಿ
Known forಶಿಕ್ಷಣ ಮಂತ್ರಿ

ಜನನ

ಎಚ್. ಜಿ. ಗೋವಿಂದೇಗೌಡರು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಕಾನೂರು ಗ್ರಾಮದ ಹಿಣಚಿಯಲ್ಲಿ 1926 ಮೇ 26ರಂದು ಜನಿಸಿದರು.[೧][೨]

ವೈವಾಹಿಕ ಬದುಕು

ಅವರಿಗೆ ಐದು ಜನ ಹೆಣ್ಣು ಮಕ್ಕಳೂ, ಓರ್ವ ಪುತ್ರನೂ ಇದ್ದಾರೆ.

ಸಾಧನೆ

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಗೋವಿಂದೇಗೌಡರು ಕರ್ನಾಟಕದ ಶಿಕ್ಷಣ ಮಂತ್ರಿಯಾಗಿ ಒಂದು ಲಕ್ಷದ ಐದು ಸಾವಿರ ಶಿಕ್ಷಕರನ್ನು ನೇಮಿಸಿ ದಾಖಲೆಗೈದಿದ್ದಾರೆ. ಶಿಕ್ಷಕ ಹುದ್ದೆಯ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ಕಲ್ಪಿಸಿದ ಹೆಗ್ಗಳಿಕೆಯೂ ಅವರಿಗಿದೆ.

ಮರಣ

ಗೋವಿಂದೇಗೌಡರು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಕೊಪ್ಪದಲ್ಲಿ 2016 ಜನವರಿ 6ರಂದು ನಿಧನರಾದರು.

🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ