ಕೆ.ಸಿ.ಎನ್.ಗೌಡ

ಕೆ.ಸಿ.ಎನ್.ಗೌಡ 1928-2012. ಕನ್ನಡ ಚಲನಚಿತ್ರ ನಿರ್ಮಾಣ, ಹಂಚಿಕೆ ಮತ್ತು ಪ್ರದರ್ಶನ ವಲಯದಲ್ಲಿ ದೊಡ್ಡ ಹೆಸರು ಮಾಡಿರುವ ಕೆ.ಸಿ.ಎನ್. ಸಂಸ್ಥೆಯ ನಿರ್ಮಾತೃ.

ಬಾಲ್ಯ ಮತ್ತು ಜೀವನ

ದೊಡ್ಡಬಳ್ಳಾಪುರದ ಸಮೀಪದ ಕೊನೇನಹಳ್ಳಿ ಹಳ್ಳಿಯ ರೈತ ಕುಟುಂಬದಲ್ಲಿ ಕೆ.ಸಿ. ನಂಜುಂಡೇಗೌಡರು 1926ರ ಜನವರಿ 6 ರಂದು ಜನಿಸಿದರು. ತಂದೆ ಕೆ.ಚವಡಯ್ಯ, ತಾಯಿ ಮುದ್ದಮ್ಮ. ಹಿರಿಯರ ಕಾಲದಿಂದಲೂ ಇವರದು ರೇಷ್ಮೆ ಉದ್ಯಮ. ಇವರ ರೇಷ್ಮೆ ಜವಳಿಗೆ ಭಾರಿ ಬೇಡಿಕೆ. ವ್ಯಾಪಾರವೂ ಅಷ್ಟೇ ಭಾರಿ. ಈ ಉದ್ಯಮದ ಜೊತೆಗೆ ಬಣ್ಣದ ಲೋಕದ ವ್ಯಾಪಾರಕ್ಕೂ ಇಳಿದರು.

ಚಿತ್ರೋದ್ಯಮಿ

ದೊಡ್ಡಬಳ್ಳಾಪುರದಲ್ಲಿ ಸೌಂದರ್ಯಮಹಲ್, ಬೆಂಗಳೂರಿನಲ್ಲಿ ನವರಂಗ್, ಊರ್ವಶಿ ಚಿತ್ರ ಮಂದಿರಗಳನ್ನು ನಿರ್ಮಿಸಿ ಪ್ರದರ್ಶಕರಾದರು. ಕೆ.ಸಿ.ಎನ್.ಸಂಸ್ಥೆ ಸ್ಥಾಪಿಸಿ, ಚಲನಚಿತ್ರ ವಿತರಕರಾಗಿ ಕನ್ನಡ ಚಿತ್ರೋದ್ಯಮದ ಬೆಳೆವಣಿಗೆಗೆ ನೆರವಾದರು. ರಾಜಕಮಲ್ ಆಟ್ರ್ಸ್‌ ಸಂಸ್ಥೆ ಆರಂಭಿಸಿ ದೊಡ್ಡ ಮಟ್ಟದಲ್ಲಿ ಚಿತ್ರನಿರ್ಮಾಪಕರೂ ಆದರು. ಜೊತೆಗೆ ತಮ್ಮ ಇಬ್ಬರು ಪುತ್ರರನ್ನು-ಕೆ.ಸಿ.ಎನ್. ಚಂದ್ರಶೇಖರ್ ಮತ್ತು ಕೆ.ಸಿ.ಎನ್.ಮೋಹನ್-ಇವರನ್ನು ಚಿತ್ರೋದ್ಯಮದಲ್ಲಿ ತೊಡಗಿಸಿದರು. ಕೆ.ಸಿ.ಎನ್.ಚಂದ್ರಶೇಖರ್ ಕರ್ನಾಟಕ ಚಲನಚಿತ್ರ ವಾಣಿಜ್ಯಮಂಡಳಿ ಹಾಗೂ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಗಳ ಅಧ್ಯಕ್ಷರಾಗಿ ಉದ್ಯಮದ ಬೆಳೆವಣಿಗೆಗೆ ನೆರವಾಗಿದ್ದಾರೆ. ಇವರೀರ್ವರು ಶ್ರೇಷ್ಠ ನಿರ್ಮಾಪಕರು ಹಾಗೂ ವಿತರಕರೆಂದೂ ಹೆಸರು ಪಡೆದಿದ್ದಾರೆ.

ನಿರ್ಮಾಪಕ

ಕೆ.ಸಿ.ಎನ್.ಗೌಡರು, ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಬಂಗಾರದ ಮನುಷ್ಯ ಚಿತ್ರದ ನಿರ್ಮಾಪಕರಿಗೆ ನೆರವು ನೀಡಿ, ಆ ಚಿತ್ರದ ವಿತರಣೆಯನ್ನೂ ಮಾಡಿದರು. ಹುಲಿಯ ಹಾಲಿನ ಮೇವು, ಬಬ್ರುವಾಹನದಂತಹ ಅದ್ದೂರಿಯ ಜನಪ್ರಿಯ ಚಿತ್ರಗಳನ್ನು ನಿರ್ಮಿಸಿದರಲ್ಲದೆ, ಉತ್ತಮ ಅಭಿರುಚಿಯ ಯಶಸ್ವಿ ಚಿತ್ರಗಳಾದ ಶರಪಂಜರ, ಭಲೇಜೋಡಿ ಮುಂತಾದ ನೂರಕ್ಕೂ ಹೆಚ್ಚು ಚಿತ್ರಗಳ ಹಂಚಿಕೆದಾರರು. ಕಸ್ತೂರಿ ನಿವಾಸ, ತಾಯಿ ದೇವರು, ಬಭ್ರುವಾಹನ, ದಾರಿ ತಪ್ಪಿದಮಗ, ದೂರದ ಬೆಟ್ಟ, ಹುಲಿಯ ಹಾಲಿನಮೇವು, ಸನಾದಿ ಅಪ್ಪಣ್ಣ, ಭಕ್ತ ಸಿರಿಯಾಳ, ರಂಗನಾಯಕಿ ಮೊದಲಾದ ಚಿತ್ರಗಳನ್ನು ತೆರೆಗಿತ್ತರು. ಹುಣಸೂರು ಕೃಷ್ಣಮೂರ್ತಿ, ಪುಟ್ಟಣ್ಣ ಕಣಗಾಲ್, ಸಿದ್ದಲಿಂಗಯ್ಯ, ವಿಜಯಾರೆಡ್ಡಿ ಮೊದಲಾದ ಪ್ರತಿಭಾವಂತ ನಿರ್ದೇಶಕರಿಗೆ ಪ್ರೋತ್ಸಾಹಿಸಿ, ಉತ್ತಮ ಚಿತ್ರಗಳ ನಿರ್ಮಾಣಕ್ಕೆ ನೀರೆರೆದರು. ಚಲನಚಿತ್ರ ವಹಿವಾಟು ಕೇಂದ್ರವಾದ ಗಾಂಧಿನಗರದಲ್ಲಿ ಕೆ.ಸಿ.ಎನ್.ಸಂಸ್ಥೆ ಒಂದು ಪ್ರತಿಷ್ಠಿತ ಸಂಸ್ಥೆಯಾಗಿ ಹಲವು ದಶಕಗಳ ಕಾಲ ಮೆರೆಯಿತು. ನವರಂಗ್ ಚಿತ್ರಮಂದಿರ ಕನ್ನಡ ಚಿತ್ರಗಳಿಗೇ ಮೀಸಲಾಗಿರುವುದು ಗಮನಾರ್ಹ.

ಪ್ರಶಸ್ತಿಗಳು

  • ಕರ್ನಾಟಕ ರಾಜ್ಯಸರ್ಕಾರ ಚಿತ್ರೋದ್ಯಮಕ್ಕೆ ಕೆ.ಸಿ.ಎನ್.ಗೌಡರ ವಿಶಿಷ್ಟ ಸೇವೆಗಾಗಿ 2002-2003ನೆಯ ಸಾಲಿನ ರಾಜಕುಮಾರ್ ಪ್ರಶಸ್ತಿಯನ್ನಿತ್ತು ಗೌರವಿಸಿದೆ.
  • ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ </ref>[೧]

ನಿಧನ

ಇವರು 2012ರ ಅಕ್ಟೋಬರ್ 4 ರಂದು ನಿಧನರಾದರು.

ಬಾಹ್ಯ ಸಂಪರ್ಕಗಳು

ಉಲ್ಲೇಖಗಳು

ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ:
🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ