ಕೆ. ಎಸ್. ನಾರಾಯಣಾಚಾರ್ಯ

ಕೆ. ಎಸ್. ನಾರಾಯಣಾಚಾರ್ಯ[೩೦ ಅಕ್ಟೋಬರ್ ೧೯೩೩ - ೨೬ ನವೆಂಬರ್ ೨೦೨೧] ಇವರು ಕನ್ನಡದ ಭಾರತೀಯ ಸಂಸ್ಕೃತಿಯ ಲೇಖಕರು, ಪ್ರಚಾರಕರು ಮತ್ತು ಪ್ರವಚನಕಾರರು. ಇವರು ಕನಕಪುರದ ವೈದಿಕ ಶ್ರೀ ವೈಷ್ಣವ ಕುಟುಂಬದಲ್ಲಿ ಜನಿಸಿದರು. ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಇವರು ಪ್ರವಚನಗಳಿಂದ ಲೇಖನದೆಡೆಗೂ ಮುಖ ಮಾಡಿದರು.

ಶಿಕ್ಷಣ

ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಸ್ಸಿ(೧೯೫೪), ಬಿ.ಎ(ಆನರ್ಸ್)(೧೯೫೭), ಎಂ.ಎ(ಇಂಗ್ಲಿಷ್)(೧೯೫೮) ಪದವಿಗಳು. "ಡಬ್ಲು. ಬಿ. ಯೇಟ್ಸ್ ಮತ್ತು ಟಿ. ಎಸ್. ಎಲಿಯೇಟ್ ರ ಕಾವ್ಯ್ದ ಮೇಲೆ ಭಾರತೀಯ ತತ್ವಶಾಸ್ತ್ರ ಪ್ರಭಾವ" ಇವರ ಪಿ.ಎಚ್.ಡಿ ಪ್ರಬಂಧ(೧೯೫೯-೬೧).

ಶೈಕ್ಷಣಿಕ ಸೇವೆ

  • ೧೯೬೧ರಲ್ಲಿ ಧಾರವಾಡದ ಕರ್ನಾಟಕ ಆರ್ಟ್ಸ್ ಕಾಲೇಜಿನಲ್ಲಿ ಅಧ್ಯಾಪಕರಾಗಿ ನೇಮಕ
  • ೧೯೬೭ರಲ್ಲಿ ಧಾರವಾಡದ ಕರ್ನಾಟಕ ಆರ್ಟ್ಸ್ ಕಾಲೇಜಿನಲ್ಲಿ ಪ್ರವಾಚಕ
  • ೧೯೭೩ರಲ್ಲಿ ಧಾರವಾಡದ ಕರ್ನಾಟಕ ಆರ್ಟ್ಸ್ ಕಾಲೇಜಿನಲ್ಲಿ ಪ್ರಾಧ್ಯಾಪಕ
  • ೧೯೯೧ರಲ್ಲಿ ಧಾರವಾಡದ ಕರ್ನಾಟಕ ಆರ್ಟ್ಸ್ ಕಾಲೇಜಿನ ಪ್ರಾಚಾರ್ಯ
  • ೧೯೯೩ರಲ್ಲಿ ನಿವೃತ್ತಿ

ಪುಸ್ತಕಗಳು

  • ವೇದ ಸಂಸ್ಕೃತಿಯ ಪರಿಚಯ(೧೦ ಸಂಪುಟ)
  • ಶ್ರೀ ರಾಮಾವತಾರ ಸಂಪೂರ್ಣವಾದಾಗ
  • ಶ್ರೀ ರಾಮಾಯಣ ಪಾತ್ರ ಪ್ರಪಂಚ
  • ಶ್ರೀ ಮಹಾಭಾರತ ಪಾತ್ರ ಪ್ರಪಂಚ
  • ಆ ಹದಿನೆಂಟು ದಿನಗಳು
  • ರಾಜಸೂಯದ ರಾಜಕೀಯ
  • ರಾಜಸೂಯ ತಂದ ಅನರ್ಥ
  • ಶ್ರೀ ಕೃಷ್ಣಾವತಾರ (೨ ಸಂ.)
  • ಅಗಸ್ತ್ಯ
  • ದಶಾವತಾರ
  • ಮಹಾಮಾತೆ ಕುನ್ತೀ ಕಂದೆರೆದಾಗ
  • ನಳ ದಮಯಂತಿ
  • ಆಚಾರ್ಯ ಚಾಣಕ್ಯ
  • ರಾಮಾಯಣ ಸಂಪೂರ್ಣವಾದಾಗ
  • ಶ್ರೀ ರಾಮಾಯಣಸಾಹಸ್ರೀ (೫ಭಾಗ)
  • ಶ್ರೀ ರಾಮಾಯಣದ ಮಹಾ ಪ್ರಸಂಗಗಳು
  • ಶ್ರೀ ಕೃಷ್ಣ ಮತ್ತು ಮಹಾಭಾರತ ಯುದ್ದ
  • ಭಾರತೀಯ ಇತಿಹಾಸ ಪುರಾಣಗಳು
  • ಭಾರತ, ಇಸ್ಲಾಂ ಮತ್ತು ಗಾಂಧಿ
  • ಸಮಾಜ ಮತ್ತು ಆಧ್ಯಾತ್ಮೀಕರಣ
  • ಶ್ರೀ ಮಹಾಭಾರತ ಕಾಲ ನಿರ್ಣಯ
  • ರಾಷ್ಟ್ರೀಯ ಚಿಂತನೆಗಳು ಮತ್ತು ಪರಾಮರ್ಶೆಗಳು -೧
  • ರಾಷ್ಟ್ರೀಯ ಚಿಂತನೆಗಳು ಮತ್ತು ಪರಾಮರ್ಶೆಗಳು-೨
  • ರಾಷ್ಟ್ರೀಯ ಚಿಂತನೆಗಳು ಮತ್ತು ಪರಾಮರ್ಶೆಗಳು-೩
  • ರಾಷ್ಟ್ರಾವಲೋಕನ
  • ವನದಲ್ಲಿ ಪಾಂಡವರು
  • ವಾಲ್ಮೀಕಿ ಯಾರು?

ಪ್ರಶಸ್ತಿ, ಬಿರುದುಗಳು

  • 'ವಿದ್ವನ್ಮಣಿ', 'ವೇದಭೂಷಣ', 'ವಾಲ್ಮೀಕಿ ಹೃದಯಜ್ಞ', 'ರಾಮಾಯಣಾಚಾರ್ಯ', 'ಮಹಾಭಾರತಾಚಾರ್ಯ' ಮೊದಲಾದ ಬಿರುದುಗಳು ವಿವಿಧ ಮಠಾಧೀಶರಿಂದ.
  • ಗಮಕರತ್ನಾಕರ(ಗಮಕ ಸಮ್ಮೇಳನಾಧ್ಯಕ್ಷರಾಗಿ, ಸರಕಾರದಿಂದ).
  • ವೇದ ಸಂಸ್ಕೃತಿ ಮಾಲೆಗೆ ರಾಜ್ಯ ಸಾಹಿತ್ಯ ಅಕಾಡೆಮಿಯಿಂದ ಬಹುಮಾನ(೧೯೭೩).
  • ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (೨೦೦೮)

ಸಧ್ಯದ ಕೈಂಕರ್ಯ

ಸಮಗ್ರ ರಾಮಾಯಣ, ಮಹಾಭಾರತ, ಭಾಗವತಗಳ ಕಾದಂಬರೀಕರಣ. ದೇಶಾದ್ಯಂತ ರಾಮಾಯಣ, ಭಾರತ, ಗೀತೆ, ಭಾಗವತ, ಆಳ್ವಾರುಗಳ ಮೊದಲಾದ ಸಾಹಿತ್ಯ ಕುರಿತು ಕನ್ನಡ, ತಮಿಳು, ಆಂಗ್ಲಗಳಲ್ಲಿ ಪ್ರವಚನ. ಭಾರತೀಯ ಸಂಸ್ಕೃತಿ ಪ್ರಸಾರ, ಸಂಶೋಧನೆ.

ನಿಧನ

೨೬ ನವೆಂಬರ್ ೨೦೨೧ ರ ಬೆಳಗಿನ ಜಾವ ೨ ಗಂಟೆಗೆ ಬೆಂಗಳೂರಿನಲ್ಲಿ ನಿಧನರಾದರು.[೧][೨]

ಉಲ್ಲೇಖಗಳು

ಹೊರಕೊಂಡಿಗಳು

🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ