ಕ್ಷೀರಸಮುದ್ರ

ಕ್ಷೀರಸಮುದ್ರವು ಪುರಾಣೋಕ್ತವಾದ ಸಪ್ತ ಸಮುದ್ರಗಳಲ್ಲಿ ಒಂದು. ಲವಣ, ಇಕ್ಷು, ಸುರಾ (ಮದ್ಯ) ಸರ್ಪಿಸ್ (ತುಪ್ಪ), ದಧಿ, ಜಲ ಇವೇ ಉಳಿದ ಆರು ಸಮುದ್ರಗಳು. ಕ್ಷೀರ ಸಮುದ್ರದ ವಿಸ್ತೀರ್ಣ ಆರು ಲಕ್ಷ ಯೋಜನಗಳೆನ್ನಲಾಗಿದೆ. ಈ ಸಮುದ್ರದಲ್ಲಿ ನಡೆದ ಆಮೃತಮಥನದ ವಿಚಾರ ರಾಮಾಯಣ, ಭಾರತ, ಭಾಗವತ, ಪದ್ಮಪುರಾಣಾದಿಗಳಲ್ಲಿ ಬಂದಿದೆ.

ಸಮುದ್ರಮಥನ, ca 1870
ಕ್ಷೀರಸಾಗರದಲ್ಲಿ ಆದಿಶೇಷನ ಮೇಲೆ ಪವಡಿಸಿರುವ ವಿಷ್ಣು ಮತ್ತು ಲಕ್ಷ್ಮಿ ca 1870
A depiction of the Samudra manthan at the airport

ಸಮುದ್ರಮಥನದ ಕಥೆ

ಒಮ್ಮೆ ದೂರ್ವಾಸ ಮುನಿ ಇಂದ್ರನನ್ನು ಕಾಣಲು ಅಮರಾವತಿಯ ಕಡೆಗೆ ಹೊರಟಾಗ, ಎದುರಿಗೆ ಬಂದ ಇಂದ್ರ ಮುನಿಯನ್ನು ಕಂಡೂ ಕಾಣದಂತೆ ಇದ್ದುದನ್ನು ಗಮನಿಸಿ ಸಿಟ್ಟಿಗೆದ್ದ ಮುನಿ ಆತನ ಸಕಲ ಐಶ್ವರ್ಯವೂ ನಾಶವಾಗಲೆಂದು ಶಾಪಕೊಟ್ಟ. ಇಂಥ ಸಮಯ ನಿರೀಕ್ಷೆಯಲ್ಲಿದ್ದ ದೈತ್ಯರು ಇಂದ್ರಲೋಕವನ್ನು ವಶಪಡಿಸಿಕೊಂಡು ದೇವತೆಗಳಿಗೆಲ್ಲ ತೊಂದರೆ ಕೊಡಲು ಉಪಕ್ರಮಿಸಿದರು. ಕಳೆಗುಂದಿದ ದೇವತೆಗಳು ವಿಷ್ಣುವನ್ನು ಮೊರೆ ಹೊಕ್ಕರು. ಆಗ ವಿಷ್ಣು ದೇವತೆಗಳನ್ನು ಸಮಾಧಾನಪಡಿಸಿ ರಾಕ್ಷಸರೊಂದಿಗೆ ಸಮುದ್ರಮಥನ ಮಾಡಿದಲ್ಲಿ ಶುಭವಾಗುವುದೆಂದು ಸೂಚಿಸಿದ. ಅದರಂತೆ ದೇವತೆಗಳು ಉಪಾಯದಿಂದ ದೈತ್ಯರನ್ನು ಒಲಿಸಿಕೊಂಡು ಪಾಲ್ಗಡಲನ್ನು ಕಡೆದು ಅಮೃತವನ್ನು ಸಂಪಾದಿಸಿಕೊಂಡು ಇಬ್ಬರೂ ಸುಖವಾಗಿ ಬಾಳುವ ಯೋಜನೆಯನ್ನು ಹಾಕಿದರು. ಸ್ವಭಾವದಿಂದ ಅಲ್ಪ ತೃಪ್ತರಾದ ದಾನವರು ದೇವತೆಗಳ ಮಾತನ್ನು ನಂಬಿ ಮಂದರ ಪರ್ವತವನ್ನು ಕಡೆಗೋಲಾಗಿಯೂ ವಾಸುಕಿಯನ್ನು ಹಗ್ಗವನ್ನಾಗಿಯೂ ಮಾಡಿಕೊಂಡು ಅಮೃತಕ್ಕಾಗಿ ಸಮುದ್ರವನ್ನು ಮಥಿಸಲು ಆರಂಭಿಸಿದರು. ಕುಸಿಯುತ್ತಿದ್ದ ಪರ್ವತವನ್ನು ಕೂರ್ಮಾವತಾರಿಯಾದ ವಿಷ್ಣು ಬೆನ್ನ ಮೇಲೆ ಹೊತ್ತವನಾಗಿ ಮಂಥನ ಸುಸೂತ್ರವಾಗಿ ನಡೆಯಿತು. ಕಡೆತ ಮುಂದುವರಿದಂತೆ ವಾಸುಕಿಯ ವದನದಿಂದ ವಿಷ ಉಕ್ಕಿ ಹರಿಯತೊಡಗಿತು. ವಿಷಜ್ವಾಲೆಗೆ ಕಂಗೆಟ್ಟ ದೇವದಾನವರು ಶಿವನನ್ನು ಮರೆಹೊಕ್ಕರು. ಶಿವ ಆ ವಿಷವನ್ನು ಪಾನ ಮಾಡಿ ವಿಷಕಂಠನಾದ. ಅನಂತರ ಸಮುದ್ರದಿಂದ ಕಾಮಧೇನು, ಉಚ್ಚೈಃಶ್ರವಸ್ಸು, ಐರಾವತ, ಕೌಸ್ತುಭಮಣಿ, ಚಂದ್ರ, ಲಕ್ಷ್ಮಿ, ಅಪ್ಸರ ಸ್ತ್ರೀಯರು ಹುಟ್ಟಿ ಬಂದರು. ಕೊನೆಯಲ್ಲಿ ಧನ್ವಂತರಿ ಒಂದು ಕೈಲಿ ಅಮೃತವನ್ನೂ ಮತ್ತೊಂದು ಕೈಲಿ ಅಳಲೆಕಾಯನ್ನೂ ಹಿಡಿದು ಬಂದ. ಧನ್ವಂತರಿಯ ಕೈಲಿದ್ದ ಅಮೃತಕಳಶವನ್ನು ದಾನವರು ಅಪಹರಿಸಿದರು. ಆದರೆ ವಿಷ್ಣು ಮೋಹಿನಿ ರೂಪದಿಂದ ಅಮೃತವನ್ನು ಪಡೆದು ದೇವತೆಗಳಿಗೆ ಬಡಿಸಿದ. ಅಂದಿನಿಂದ ದೇವತೆಗಳು ಅಮರತ್ವವನ್ನು ಪಡೆದರು. ಈ ವಿವರಗಳು ಭಾಗವತದಲ್ಲಿವೆ.

ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ:
🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ