ಡಾ.ಗಿರೆಡ್ಡಿ ಗೋವಿಂದರಾಜ. ಕನ್ನಡದ ಶ್ರೇಷ್ಠ ವಿಮರ್ಶಕರು.ಇವರು ೧೯೩೯ಸೆಪ್ಟಂಬರ ೨೩ರಂದು ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಯಲ್ಲಿ ಜನಿಸಿದರು.ನವ್ಯ ಸಾಹಿತ್ಯ ಯುಗದ ಪ್ರಥಮ ಪಂಕ್ತಿಗೆ ಸೇರುವ ವಿಮರ್ಶಕರು.[೧][೨]
ಅಧ್ಯಯನ
ಗಿರಡ್ಡಿಯವರ ಪ್ರಾಥಮಿಕ ಶಿಕ್ಷಣ ಅಬ್ಬಿಗೇರಿಯಲ್ಲಿಯೆ ಆಯಿತು. ಮಾಧ್ಯಮಿಕ ಶಿಕ್ಷಣವನ್ನು ರೋಣದಲ್ಲಿ ಪೂರ್ಣಗೊಳಿಸಿದ ಗಿರಡ್ಡಿಯವರು ೧೯೫೭ರಲ್ಲಿ ಎಸ್.ಎಸ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದರು. ೧೯೬೧ರಲ್ಲಿ ಧಾರವಾಡದಲ್ಲಿರುವ ಕರ್ನಾಟಕ ಕಾಲೇಜಿನಿಂದ ಬಿ.ಎ. ಪದವಿಯನ್ನು ಪಡೆದ ಗಿರಡ್ಡಿಯವರು ಕರ್ನಾಟಕ ವಿಶ್ವವಿದ್ಯಾಲಯದ ಎಮ್.ಎ. ಇಂಗ್ಲಿಷ್ ಪದವಿಯನ್ನು ೧೯೬೩ರಲ್ಲಿ ಹಾಗು. ಎಮ್.ಎ. ಕನ್ನಡ ಪದವಿಯನ್ನು ೧೯೬೯ರಲ್ಲಿ ಪಡೆದರು. ೧೯೭೦ರಲ್ಲಿ ಹೈದರಾಬಾದದಲ್ಲಿರುವ ಸೆಂಟ್ರಲ್ ಇನ್ಸ್ಟಿಟ್ಯೂಟದಿಂದ ಡಿಪ್ಲೋಮಾ ಇನ್ ಇಂಗ್ಲಿಷ್ ಸ್ಟಡೀಜ್ ಪಡೆದರು. ೧೯೭೩ರಲ್ಲಿ ಇಂಗ್ಲಂಡ್ದಲ್ಲಿರುವ ಲ್ಯಾಂಕಾಸ್ಟರ್ ವಿಶ್ವವಿದ್ಯಾಲಯದಿಂದ ಎಮ್.ಎ. (ಭಾಷಾಶಾಸ್ತ್ತ್ರ) ಪದವಿ ಪಡೆದರು. ೧೯೮೩ರಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಶೈಲಿಶಾಸ್ತ್ರದಲ್ಲಿ ಪಿಎಚ್.ಡಿ. ಪದವಿ ಪಡೆದರು.
ಅಧ್ಯಾಪನ
೧೯೬೩-೧೯೬೪ರವರೆಗೆ ಹಾವೇರಿ ಜಿಲ್ಲೆಯ ಹನುಮನಮಟ್ಟಿಯಲ್ಲಿಯ ಗ್ರಾಮೀಣ ಮಹಾವಿದ್ಯಾಲಯದಲ್ಲಿ ಇಂಗ್ಲಿಷ್ ಅಧ್ಯಾಪಕರೆಂದು ವೃತ್ತಿಜೀವನ ಆರಂಭಿಸಿದ ಗಿರಡ್ಡಿಯವರು ೧೯೬೪ರಿಂದ ೧೯೭೦ರವರೆಗೆ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಬೋಧಿಸಿದರು.೧೯೭೦ರಿಂದ ೧೯೮೪ರವರೆಗೆ ಕಲಬುರ್ಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದರು. ೧೯೮೪ರಿಂದ ೧೯೯೮ರವರೆಗೆ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರವಾಚಕರಾಗಿ, ಪ್ರಾಧ್ಯಾಪಕರಾಗಿ ಹಾಗು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ೧೯೯೯ ಮಾರ್ಚದಲ್ಲಿ ನಿವೃತ್ತರಾದರು.
ಹಿರಿಯ ವಿಮರ್ಶಕ ಡಾ. ಗಿರಡ್ಡಿ ಗೋವಿಂದರಾಜ (79) ಧಾರವಾಡ ಸಾಹಿತ್ಯ ಸಂಭ್ರಮ ಟ್ರಸ್ಟ್ ಅಧ್ಯಕ್ಷರಾಗಿದ್ದ ಅವರು ೧೧-೫-೨೦೧೮ ಶುಕ್ರವಾರ ಸಂಜೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಬಳಿ ಇರುವ ತಮ್ಮ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು.[೩]
ಕೃತಿಗಳು
ಗಿರಡ್ಡಿ ಗೋವಿಂದರಾಜರು ಸೃಜನಶೀಲ ಸಾಹಿತ್ಯ ಹಾಗು ವಿಮರ್ಶೆ ಎರಡರಲ್ಲೂ ಖ್ಯಾತರಾಗಿದ್ದಾರೆ. ಇವರ ಕೃತಿಗಳು ಇಂತಿವೆ:[೪]