ಬಾನು ಮುಷ್ತಾಕ್

ಬಾನು ಮುಷ್ತಾಕ್ ಇವರು ೦೩-೦೪-೧೯೪೮ರಲ್ಲಿ ಹಾಸನದಲ್ಲಿ ಜನಿಸಿದರು. ಬಿ.ಎಸ್.ಸಿ., ಎಲ್.ಎಲ್.ಬಿ. ಪದವೀಧರೆಯಾಗಿದ್ದಾರೆ. ಎಸ್.ಎ.ರೆಹಮಾನ್ ಮತ್ತು ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದಾರೆ. ಸದ್ಯ ಹಾಸನದಲ್ಲಿ ನ್ಯಾಯವಾದಿಯಾಗಿದ್ದಾರೆ.ಇವರು ಕನ್ನಡದ ನವ್ಯೋತ್ತರ ಲೇಖಕಿ. ಲಂಕೇಶ್ ಪತ್ರಿಕೆ ಮೂಲಕ ಬರವಣಿಗೆ ಆರಂಭಿಸಿದರು.


ಕೃತಿಗಳು

ಕಥಾ ಸಂಕಲನ

  • ಹೆಜ್ಜೆ ಮೂಡಿದ ಹಾದಿ
  • ಬೆಂಕಿ ಮಳೆ
  • ಎದೆಯ ಹಣತೆ
  • ಸಫೀರಾ
  • ಬಡವರ ಮಗಳು ಹೆಣ್ಣಲ್ಲ

ಕಾದಂಬರಿ

  • ಕುಬ್ರ

ಲೇಖನ ಸಂಕಲನ

  • ಇಬ್ಬನಿಯ ಕಾವು

ಕವನ ಸಂಕಲನ

  • ಒದ್ದೆ ಕಣ್ಣಿನ ಬಾಗಿನ

ಕಾನೂನು ಕೃತಿಗಳು

ಕೌಟುಂಬಿಕ ದೌರ್ಜನ್ಯ ಕಾಯಿದೆ

ಸಾರ್ವಜನಿಕ ಸೇವೆಯ ವಿವರಗಳು

  • ಹಾಸನ ನಗರ ಸಭೆಗೆ 1983ರಿಂದ ಎರಡು ಅವಧಿಗೆ ನಗರಸಭಾ ಸದಸ್ಯೆಯಾಗಿ ಆಯ್ಕೆಯಾಗಿದ್ದರು.
  • ಹಾಸನದ ಜಿಲ್ಲಾ ಶ್ರೀ ಚಾಮ ರಾಜೇಂದ್ರ ಆಸ್ಪತ್ರೆಯಲ್ಲಿ ಸಂದರ್ಶಕರ ಮಂಡಳಿಯ ಅಧ್ಯಕ್ಷೆಯಾಗಿದ್ದರು.
  • ರಾಜ್ಯ ಗ್ರಂಥಾಲಯ ಪ್ರಾಧಿಕಾರದ ಸದಸ್ಯೆಯಾಗಿದ್ದರು.
  • ಹಾಸನ ನಗರ ಗ್ರಂಥಾಲಯ ಸಮಿತಿಯ ಸದಸ್ಯೆಯಾಗಿದ್ದರು
  • ಆಕಾಶವಾಣಿ ಬೆಂಗಳೂರು ಕೇಂದ್ರದ ಸಲಹಾ ಮಂಡಳಿ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದು.
  • ಹಾಸನದ ಜಿಲ್ಲಾ ಸಮತಾ ವೇದಿಕೆಯ ಅಧ್ಯಕ್ಷೆಯಾಗಿ 1993ರಲ್ಲಿ ಮತ್ತು ಮಹಿಳಾ ವಿಕಾಸ ವೇದಿಕೆ ಅಧ್ಯಕ್ಷೆಯಾಗಿ ಸೇವೆಸಲ್ಲಿಸಿದ್ದಾರೆ.

ಬಾಹ್ಯ ಸಂಪರ್ಕ

ನಾರಾಯಣಪ್ರಸಾದ್ ಅವರ ಬಾಗ್ [೧]

ಉಲ್ಲೇಖ

🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ