ಯಾದಗಿರಿ ಜಿಲ್ಲೆ

ಕರ್ನಾಟಕ ರಾಜ್ಯದ ಜಿಲ್ಲೆ
ಯಾದಗಿರಿ ಜಿಲ್ಲೆ
ಯಾದಗಿರಿ (ಯಾದವಗಿರಿ)
city
Population
 (2001)
 • Total೫೮,೮೦೨

ಯಾದಗಿರಿ ಇತಿಹಾಸ

ಈ ಹಿಂದೆ ಈ ಪ್ರದೇಶವನ್ನು "ಯಾದವ" ಎಂಬ ರಾಜವಂಶದವರು ಆಳುತ್ತಿದ್ದರಂತೆ . "ಯಾದವರ" ಈ ವಂಶವನ್ನು ಕೆಲವು ಕಡೆ ಯದುವಂಶ ಎಂದು ಕೂಡಾ ಕೆಲವು ಕಡೆ ಉಲ್ಲೆಖಿಸಲಾಗಿದೆ ಎಂಬುವದು ಬಲ್ಲ ಮೂಲಗಳಿಂದ ತಿಳಿಯುತ್ತದೆ. ಯಾದಗಿರಿ, ಕ್ರಿ. ಪೂ ೧೩೪೭ ರಿಂದ ೧೪೨೫ ರ ವರೆಗೆ ಯಾದವರ ರಾಜಧಾನಿಯಾಗಿತ್ತು. ಆಕಾಲದ ಪ್ರಮುಖರಾದ ಸಂತವರು, ಚಾಲುಕ್ಯರು, ರಾಷ್ಟ್ರಕೂಟರು, ಶಾಹಿಗಳು, ಆದಿಲ್ ಶಾಹಿಗಳು, ನಿಜಾಮ್ ಶಾಹಿಗಳು ಯಾದಗಿರಿಯನ್ನ ಆಳಿದ್ದಾರೆ. ಯಾದಗಿರಿಯಲ್ಲಿ ಒಂದು ಭವ್ಯ ವಾದ ಗುಡ್ಡ ಯಾದಗಿರಿಯ ಹೃದಯ ಭಾಗದಲ್ಲಿದೆ ಇದನ್ನು ಬೆಟ್ಟವೆಂತಲು ಕರೆಯಬಹುದಾಗಿದೆ. ಯಾದವರು ಆಳುತ್ತಿದ್ದ ಈ ನಾಡಿಗೆ ಬೆಟ್ಟ ಅಂದರೆ ಗಿರಿ ಸೇರಿರುವದರಿಂದ ಇದನ್ನು ಮುಂದೆ ಯಾದಗಿರಿ ಎಂದು ಕರೆಯಲಾಯಿತು . ಯಾದವನ ಗಿರಿ’, ಯಾದವ ಗಿರಿ’,ಯಾದಗಿರಿ’, ಯಾದ್ಗೀರ್’ ಎಂದು ಸರಳೀಕೃತಗೊಂಡಿದೆ. ಹೀಗೆ ಹಲವು ನಾಮಗಳಿಂದ ಕರೆಯಲಾಗುತ್ತಿದೆ.

ಯಾದಗಿರಿ ನಗರ

ರಾಜ್ಯದ ೩೦ನೇ ಜಿಲ್ಲೆಯಾಗಿ ಯಾದಗಿರಿ ಡಿಸೆಂಬರ ೩೦ ೨೦೦೯ ರಿಂದ ಅಸ್ತಿತ್ವಕ್ಕೆ ಬಂದಿದೆ . ಶಹಾಪುರ ಮತ್ತು ಸುರಪುರ ತಾಲ್ಲೂಕುಗಳನ್ನು ಸೇರಿಸಿ ಹೊಸ ಜಿಲ್ಲೆ ರಚನೆಯಾಗಿದೆ .ಸಂಪುಟ ಸಭೆಯಲ್ಲಿ ಆ. ೨೭ ೨೦೦೮ ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗುಲ್ಬರ್ಗಾ ಜಿಲ್ಲೆ�ಯನ್ನು ವಿಭಜಿಸಿ ಯಾದಗಿರಿ ಪಟ್ಟಣವನ್ನು ಕೇಂದ್ರವಾಗಿಸಿಕೊಂಡು ಹೊಸ ಜಿಲ್ಲೆ ರಚಿಸಲು ಅಂತಿಮ ನಿರ್ಣಯ ಕೈಗೊಂಡು, ಈ ಸಂಬಂಧ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು . ಈ ವಿಚಾರವನ್ನು ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡಿಸೆಂಬರ ೨೩ ೨೦೦೯ ಬುಧವಾರ ವಿಧಾನಸಭೆಯಲ್ಲಿ ಘೋಷಿಸಿದರು.

ಯಾದಗಿರಿ ಜಿಲ್ಲೆ

ಯಾದಗಿರಿ ಕರ್ನಾಟಕ ರಾಜ್ಯದ ೩೦ನೇ ಜಿಲ್ಲೆ . ಯಾದಗಿರಿ ತಾಲೂಕಿನ ಉತ್ತರದಲ್ಲಿ ಸೇಡಂ, ವಾಯುವ್ಯದಲ್ಲಿ ಚಿತ್ತಾಪುರ, ಪಶ್ಚಿಮದಲ್ಲಿ ಶಹಾಪುರ ಮತ್ತು ಪೂರ್ವದಲ್ಲಿ ಆಂಧ್ರ ಪ್ರದೇಶದ ಮಹಬೂಬನಗರದ ಮಖ್ತಲ್ ತಾಲೂಕುಗಳಿವೆ.

ಶಿಕ್ಷಣ

ಯಾದಗಿರಿ ಜಿಲ್ಲೆಯಲ್ಲಿ ಒಟ್ಟು ೧,೦೨೪ ಪ್ರಾಥಮಿಕ ಶಾಲೆಗಳು, ೧೪೯ ಪ್ರೌಢ ಶಾಲೆಗಳು, ೪೦ ಪದವಿ ಪೂರ್ವ ಕಾಲೇಜುಗಳು, ಮತ್ತು ೬ ಪದವಿ ಕಾಲೇಜುಗಳಿವೆ. ಇಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುವ ಒಟ್ಟು ೧೨೨೩ ಅಂಗನವಾಡಿ ಶಾಖೆಗಳಿವೆ.

ವೈದ್ಯಕೀಯ ಸೌಲಭ್ಯಗಳು

ಈ ಜಿಲ್ಲೆಯಲ್ಲಿ ೩ ಆಸ್ಪತ್ರೆಗಳು, ೩ ಆಯುರ್ವೇದ ಆಸ್ಪತ್ರೆಗಳು, ೩೭ ಜನಸಾಮಾನ್ಯ ಆರೋಗ್ಯ ಕೇಂದ್ರಗಳು ಮತ್ತು ೧೨೦ ಕುಟುಂಬ ಕಲ್ಯಾಣ ಕೇಂದ್ರಗಳಿವೆ .

ಜಿಲ್ಲೆಯ ರಚನೆ

ಯಾದಗಿರಿ ಜಿಲ್ಲೆಯೂ ಹಲವು ನೈಸರ್ಗಿಕ ಸಂಪನ್ಮೂಲಗಳನ್ನು ಹೊಂದಿದೆ. ಯಾದಗಿರಿಯಲ್ಲಿ ಹರಿಯುವ ಪ್ರಮುಖ ನದಿಗಳೆಂದರೆ ಕೃಷ್ಣ ಮತ್ತು ಭೀಮ. ಔದ್ಯೋಗಿಕರಣಕ್ಕೆ ಉತ್ತಮ ಅವಕಾಶಗಳಿದ್ದು, ಈಗಾಗಲೇ ಅಲ್ಲಿನ ಹಿರೆತುಮಕೂರು ಹಳ್ಳಿಯ ಹತ್ತಿರ ಸಕ್ಕರೆ ಮತ್ತು ಇಂಧನ ಕಾರ್ಖಾನೆಗಳು ಆರಂಭವಾಗಿವೆ.

ಯಾದಗಿರಿ ಜಿಲ್ಲೆಯ ತಾಲ್ಲೂಕುಗಳು

ಉಲ್ಲೇಖಗಳು

🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ