ಸಿ. ಎಚ್. ಹನುಮಂತರಾಯ

ಸಿ. ಎಚ್. ಹನುಮಂತರಾಯ ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಬೆಳವಂಗಲದ ರೈತ ಕುಟುಂಬದಲ್ಲಿ ಜನಿಸಿದರು. ಬಿ.ಎ(ಆನರ್ಸ್) ಹಾಗೂ ಎಲ್.ಎಲ್.ಬಿ. ಪದವಿಯನ್ನು ಪಡೆದ ಎವರು ಬೆಂಗಳೂರಿನ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಸಹ-ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ವಕೀಲ ವೃತ್ತಿಯಲ್ಲಿ ಹೆಸರುಗಳಿಸಿರುವ ಇವರು ರೈತಪರ ಮತ್ತು ಕನ್ನಡಪರ ಹೋರಾಟಗಾರರ ವಿರುದ್ಧ ಹಾಕಿದ ಪ್ರಕರಣಗಳಲ್ಲಿ ಅವರ ಪರ ವಕಾಲತ್ತು ವಹಿಸಿದ್ದಾರೆ. ನ್ಯಾಯಾಲಯಗಳಲ್ಲಿ ಕನ್ನಡದಲ್ಲೇ ವಾದ ಮಂಡಿಸುವ ಕೌಶಲ್ಯ ಅವರಿಗೆ ಒಲಿದಿದೆ. ಹಲವಾರು ಕಾನೂನು ಕಾಲೇಜುಗಳಲ್ಲಿ ಗೌರವ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು 'ವಕೀಲರೊಬ್ಬರ ವಗೈರೆಗಳು' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ ಲಭಿಸಿದೆ. ರಾಜ್ಯ ಸರ್ಕಾರ ಇವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ